logo
WhatsApp Image 2026-04-02 at 14.46.04.jpeg
hindalco everlast.jpeg

ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳಲು ಸಪ್ತಪದಿ ವಿವಾಹ ಸಮಾವೇಶಗಳು ಸಹಕಾರಿ : ಉಪೇಂದ್ರ ಪ್ರಭು

ಟ್ರೆಂಡಿಂಗ್
share whatsapp
share facebook
share telegram
17 May 2026
post image

ಉಡುಪಿ: ಆರ್.ಎಸ್.ಎಸ್.ಬಿ. ಹಾಗೂ ಬಿ.ಜಿ.ಎಸ್.ಬಿ. ಸಮಾಜ ಬಾಂಧವರ ಜಂಟಿ ಆಶ್ರಯದಲ್ಲಿ, ಆರ್.ಎಸ್.ಎಸ್.ಬಿ. ಮತ್ತು ಬಿ.ಜಿ.ಎಸ್.ಬಿ. ಸಪ್ತಪದಿ ವಿವಾಹ ಮಾಹಿತಿ ಕೇಂದ್ರದ ವತಿಯಿಂದ ಆಯೋಜಿಸಲಾದ ‘ಋಣಾನುಬಂಧ’ ವಧುವರರ ಸಮಾವೇಶವು ಭಾನುವಾರ ಬಂಟಕಲ್ ರೋಟರಿ ಭವನದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಪ್ತಪದಿ ವಿವಾಹ ಮಾಹಿತಿ ಕೇಂದ್ರದ ಅಧ್ಯಕ್ಷ ನಾಗೇಂದ್ರ ಕಾಮತ್ ಅವರು, ಸಮಾಜದ ಯುವ ಪೀಳಿಗೆಗೆ ಸೂಕ್ತ ಜೀವನ ಸಂಗಾತಿಯನ್ನು ಕಂಡುಕೊಳ್ಳಲು ಇಂತಹ ಸಮಾವೇಶಗಳು ಭದ್ರ ಬುನಾದಿ ಹಾಕಿಕೊಡುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಮಾಜಿ ಮೊಕ್ತೇಸರ ಅಶೋಕ್ ನಾಯಕ್ ಅವರು ಮಾತನಾಡಿ, ಧಾರ್ಮಿಕ ಭಾವನೆಗಳು ಹಾಗೂ ಶ್ರೀಮಂತ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ. ಸಾಂಪ್ರದಾಯಿಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಪ್ರಮುಖ ಉದ್ಯಮಿ ವಾಸುದೇವ ಕೃಷ್ಣ ಮಾತನಾಡಿ, ಸ್ವಸಮಾಜದೊಳಗೇ ವಧುವರರ ಅನ್ವೇಷಣೆ ಮಾಡುವುದರಿಂದ ಕೌಟುಂಬಿಕ ಬಾಂಧವ್ಯಗಳು ಗಟ್ಟಿಯಾಗುತ್ತವೆ ಹಾಗೂ ಸಮಾಜದ ಒಗ್ಗಟ್ಟು ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಸಿದ್ಧ ಜ್ಯೋತಿಷಿ ಉಪೇಂದ್ರ ಅವರು, ಹಿರಿಯರ ಮಾರ್ಗದರ್ಶನದಲ್ಲಿ ಜಾತಕ ಪರಿಶೀಲನೆ ನಡೆಸಿ ವಿವಾಹವಾಗುವುದು ದಾಂಪತ್ಯ ಜೀವನದ ಯಶಸ್ಸಿಗೆ ಒಳಿತು. ಮದುವೆ ಎಂಬುದು ಕೇವಲ ಎರಡು ಜೀವಗಳ ಬಂಧವಲ್ಲ; ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಹೇಳಿ, ಸಂಘಟಕರಿಗೆ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಚಂದ್ರಹಾಸ ಪ್ರಭು ಅವರು ಸನ್ಮಾನ ಪತ್ರ ವಾಚಿಸಿದರು. ಉದ್ಯಮಿ ಎಂ.ಎನ್. ನಾಯಕ್ ಅವರು ಸನ್ಮಾನ ಸ್ವೀಕರಿಸಿ ಸಮಾಜದ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. ಸಮಾಜದ ಆದರ್ಶ ದಂಪತಿಗಳಾದ ಶ್ರೀಮತಿ ಪ್ರೇಮಾ ಮತ್ತು ರಾಮಚಂದ್ರ ಹಾಗೂ ಅಂತರರಾಷ್ಟ್ರೀಯ ತರಬೇತುದಾರ ಸುಬ್ರಹ್ಮಣ್ಯ ಕುಳೇದು ಅವರನ್ನು ಸನ್ಮಾನಿಸಲಾಯಿತು. ಬಳಿಕ ಸುಬ್ರಹ್ಮಣ್ಯ ಕುಳೇದು ಅವರಿಂದ ವಿಶೇಷ ಉಪನ್ಯಾಸ ನಡೆಯಿತು.

ಈ ಬಾರಿಯ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಸುಮಾರು 192 ಮಂದಿ ವಧುವರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮವನ್ನು ಸುನೀಲ್ ಬೋರ್ಕರ್ ಪುತ್ತೂರು ಅವರು ನಿರೂಪಿಸಿದರು. ಕೊನೆಯಲ್ಲಿ ಸರೋಜಿನಿ ಕೊಡಿಬೆಟ್ಟು ಅವರು ಉಪಸ್ಥಿತರಿದ್ದ ಗಣ್ಯರು ಹಾಗೂ ಪೋಷಕರಿಗೆ ವಂದನಾರ್ಪಣೆ ಸಲ್ಲಿಸಿದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.